ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ