ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ← PreviousNext → ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ← PreviousNext → ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ…

    Spread the love

    You Missed

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 15 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 7 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 8 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 13 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ