ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 153 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 35 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 99 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ