ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 208 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 73 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 28 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 50 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 73 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 41 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ