ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ