ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 2 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ