ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 33 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 78 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 192 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ