ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ