ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 33 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 37 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 148 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 226 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”