ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ