ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ