BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    You Missed

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 4 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 20 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 5 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 15 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!