BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿದ್ದು ಇದೀಗ ಸಂಚಾರಕ್ಕೆ ಸುಗಮವಾಗಿದೆ Spread the love

    Spread the love

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    You Missed

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 21 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 56 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 227 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 58 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 57 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 115 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ