BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ