BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ