BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 7 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”