BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ.

ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಿ ಪರೀಕ್ಷಿಸಲು ಪ್ರಾರಂಭಿಸಿದೆ. ಸೆಪ್ಟೆಂಬರ್ 15 ರೊಳಗೆ ಮಕ್ಕಳಿಗೆ ಸಿದ್ಧವಾಗಲಿದೆ ಎಂದು ಗಮಾಲೆ ಸಂಸ್ಥೆಯ ಮುಖ್ಯಸ್ಥ ಅಲೆಕ್ಸಾಂಡರ್ ಗಿಂಟ್ಸ್‌ ಬರ್ಗ್ ಹೇಳಿದ್ದಾರೆ.

ಮಕ್ಕಳಿಗಾಗಿ ಸೂಜಿಯ ಬದಲು ಸ್ಪ್ರೇ ಮಾಡುವ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸಂಶೋಧನಾ ತಂಡ 8 ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಕೊರೋನಾ ಲಸಿಕೆ ಪರೀಕ್ಷಿಸಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ, ದೇಹದ ಉಷ್ಣತೆಯೂ ಹೆಚ್ಚಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪುಟಾಣಿಗಳಿಗೆ ನೇಸಲ್ ವ್ಯಾಕ್ಸಿನ್ ನೀಡುವ ಮೂಲಕ ಕೊರೋನಾ ಲಸಿಕೆ ನೀಡುತ್ತಿದ್ದೇವೆ. ಮಕ್ಕಳ ಮೇಲಿನ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಮಾಲೆ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಶೋಧನಾ ಕೇಂದ್ರ ಕೊರೋನಾ ವಿರುದ್ಧ ‘ಸ್ಪುಟ್ನಿಕ್ ವಿ’ ಲಸಿಕೆ ಅಭಿವೃದ್ಧಿಪಡಿಸಿದೆ. 2020 ರ ಆಗಸ್ಟ್ ನಲ್ಲಿ ನೀಡಲಾದ ವಿಶ್ವದ ಮೊದಲ ಅಧಿಕೃತ ನೋಂದಾಯಿತ ಲಸಿಕೆ ಇದಾಗಿದೆ. ಒಂದೇ ಡೋಸ್ ನೀಡುವ ‘ಸ್ಪುಟ್ನಿಕ್ ಲೈಟ್’ ಲಸಿಕೆಯನ್ನು ಕೂಡ ಗಮಾಲೆ ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ.

ಭಾರತದಲ್ಲಿ ಕೊರೋನಾ ವೈರಸ್ ಲಸಿಕೆಗೆ ಪರ್ಯಾಯವಾಗಿ ಮೂಗಿನ ಸಿಂಪಡಣೆ ಲಸಿಕೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಂಶೋಧನೆ ನಡೆಯುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟ್ರಾ ನೇಸಲ್ ಕೋವಿಡ್ -19 ಲಸಿಕೆಯ ಬಿಬಿವಿ 154 ನ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು