ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತುಗಳನ್ವಯ ಕೆಲ ವಾಹನಗಳಿಗೆ ಸಂಚಾರಕ್ಕೆ ಅನುವು

ಚಾರ್ಮಾಡಿ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರ ರಸ್ತೆಯ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಮಳೆಗಾಲದ ಸಂಧರ್ಭದಲ್ಲಿ ಉಂಟಾದ ರಸ್ತೆ ಹಾನಿ ಸಮಸ್ಯೆಯನ್ನು ಪರಿಗಣಿಸಿ ಘನ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು ಇದೀಗ 18ತಿಂಗಳ ಬಳಿಕ ಈ ಆದೇಶದಲ್ಲಿ ಸಡಿಲಿಕೆ ಮಾಡಿ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ಹಾಗೂ ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ಪ್ರಸ್ತಾಪಿತ ಮಾರ್ಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಸನರವರು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು ಹಾಗೂ ಈ ಮಾರ್ಗದಲ್ಲಿ ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಚಾರ್ಮಾಡಿ ಘಾಟ್ ಭಾಗದಲ್ಲಿ ಬಹಳಷ್ಟು ಕಡೆ ಭೂಕುಸಿತದಿಂದ ರಸ್ತೆಗೆ ತೀವ್ರತರವಾದ ಧಕ್ಕೆ ಉಂಟಾಗಿರುವುದರಿಂದ ಅತ್ಯಂತ ಜಾಗರೂಕತೆಯಿಂದ ನಿಗದಿತ ವೇಗದ ಮಿತಿಯೊಂದಿಗೆ ವಾಹನಗಳು ಸಂಚರಿಸುವುದು.

ಸಂಚರಿಸಬಹುದಾದ ಲಘು ವಾಹನಗಳಾದ ಕೆ.ಎಸ್.ಆರ್.ಟಿ.ಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೆಲರ್, ಅಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ನಿರ್ಬಂಧಿಸಲಾದ ಬಾರಿ ಘನ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಫ್ಟ್ ಕಾರ್ಗೊ ಕಂಟೈನರ್ಸ್ ಹಾಗೂ ಲಾಂಗ್ ಚಾಸಿಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್ ಟೇಲರ್, ಕೆ.ಎಸ್.ಆರ್.ಟಿ.ಸಿ ರಾಜ ಹಂಸ ಬಸ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ