ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತ ನಾಗರೀಕರು, ಇದನ್ನು ಮನಗೊಡು ಸೋಮಂತ್ತಡ್ಕ ಪರಿಸರದ ಯುವಕರಿಂದ ನಾಗರೀಕರ ನಿತ್ಯಗೋಳಿನ ಬಗ್ಗೆ ರೀಲ್ಸ್ ಮೂಲಕ ಸಂದೇಶ ರವಾನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿಗೆ DP Jain construction ಗೆ ಟೆಂಡರ್ ಆಗಿದ್ದು ಬಹುತೇಕ ಕಾಮಗಾರಿ ಪ್ರಾರಂಭವಾಗಿದ್ದು ಇತ್ತೀಚಿನ ಕೆಲವು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡು ಈ ಹೆದ್ದಾರಿಯಲ್ಲಿ ಯಾರು ಸಂಚರಿಸಲು ಆಗದಿರುವ ಹಾಗೆ ರಸ್ತೆಯ ಸ್ಥಿತಿ ನಿರ್ಮಾಣವಾಗಿದೆ

ಸಂಪೂರ್ಣ ಹದಗೆಟ್ಟು ಹೋದ ಹೆದ್ದಾರಿ

ಒಂದೆಡೆ ಗುತ್ತಿಗೆದಾರರು ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಕಾರ್ಮಿಕರು, ಇನ್ನೊಂದೆಡೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ನೌಕರರು, ಧಾರ್ಮಿಕ ಕೇಂದ್ರಗಳಿಗೆ ಬರುತ್ತಿರುವ ಭಕ್ತರು ಸ್ಥಳೀಯ ನಾಗರಿಕರು ಈ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತು ಹೋಗಿದ್ದು ವಾಹನ ಚಾಲಕರ ಹಾಗೂ ಮಾಲಕರ ಪಾಡಂತೂ ಹೇಳತೀರದೂ ಪ್ರತಿನಿತ್ಯ ಟ್ರಾಫಿಕ್ ಜಾಮ್, ಅಳಡಿ ಎತ್ತರದ ಗುಂಡಿಗಳಿಗೆ ಎದ್ದು ಬಿದ್ದು ಸಾಗುತ್ತಿರುವ ವಾಹನಗಳು ಕೇವಲ 7ಕಿ.ಮೀ ಸಾಗಲು ಕನಿಷ್ಠ 1ಗಂಟೆ ಈ ರಸ್ತೆಯಲ್ಲಿ ಸಾಗಬೇಕಾದ ದುಸ್ಥಿತಿ ಇವೆಲ್ಲವೂ ನಾಗರೀಕರ ಕೆಂಗಣ್ಣಿಗೆ ಗುರಿಯಾಗಿದೆ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗ ಜರೂರಾಗಿ ಈ ಹಿಂದೆ ಟೆಂಡರ್ ವಹಿಸಿದ್ದ ಡಿ.ಪಿ ಜೈನ್ ಕಂಪೆನಿಯ ಪರವಾನಿಗೆಯನ್ನು ಬ್ಲಾಕ್ ಲೀಸ್ಟ್ ಹಾಕಿ ಹೊಸ ಟೆಂಡರ್ ಕರೆದು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ರಿಲ್ಸ್ ಮೂಲಕ ಸಂದೇಶ ಸಾರಿದ ಯುವಕರು

ಇದರ ಬೆನ್ನಲ್ಲೇ ಸ್ಥಳೀಯ ಯುವಕರು ಸೇರಿಕೊಂಡು ಜನರು, ವಾಹನ ಮಾಲೀಕರು ಚಾಲಕರು ಪಡುತ್ತಿರುವ ಸಂಕಟವನ್ನು ರೀಲ್ಸ್ ಮೂಲಕ ಸಂದೇಶ ರವಾನಿಸಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೀಲ್ಸ್ ನಲ್ಲಿ ರಾಹುಲ್ ಕಾನರ್ಪ, ರಜನೀಶ್, ರಾಜೇಶ್ ಸೋಮಂತ್ತಡ್ಕ ಸೇರಿಕೊಂಡು ವಾಹನ ಚಾಲಕ, ಮಾಲೀಕ ಹಾಗೂ ಪಿಟ್ಟರ್ ನಾ ಸದ್ಯದ ಪರಿಸ್ಥಿತಿಯನ್ನು ರೀಲ್ಸ್ ಮೂಲಕ ತೋರಿಸುವುದರೊಂದಿಗೆ ಮತ್ತೊಮ್ಮೆ ಜನಮನ ಗೆದ್ದಿದ್ದಾರೆ. ಒಟ್ಟಾರೆಯಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಮುಕ್ತಿ ಸಿಗಲಿ ಎಂಬುದೇ ನಮ್ಮ ಆಶಯ.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 66 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 23 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2238 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ