![](https://kalanirnayanews.com/wp-content/uploads/2023/12/IMG-20231202-WA0024-1.jpg)
ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲರಾದ ಶ್ರೀ ಪ್ರೀತಂ ಎಂಬವರಿಗೆ ದಿನಾಂಕ: 30-11-2023ರಂದು ಚಿಕ್ಕಮಗಳೂರು ಪೋಲೀಸರು, ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ನಂತರ ಠಾಣೆಗೆ ಕರೆದೊಯ್ದು ಠಾಣೆಯಲ್ಲಿ ಅಕ್ರಮ ಬಂಧನದಲ್ಲಿರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಮಾನ್ಯ ಮುಖ್ಯಮಂತ್ರಿ ಯವರಿಗೆ ಬೆಳ್ತಂಗಡಿ BAR association ವತಿಯಿಂದ ತಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
![](https://103.180.45.14/kalanirnaya1/wp-content/uploads/2023/12/IMG-20231202-WA0025-1-1024x768.jpg)
ನ್ಯಾಯಾಂಗದ ಅವಿಭಾಜ್ಯ ಅಂಗವಾಗಿ ಕೆಲಸ ಮಾಡುತ್ತಿರುವ ವಕೀಲ ಸಮುದಾಯದ ಮೇಲೆ ಈ ರೀತಿಯ ಹಲ್ಲೆ ಮತ್ತು ದೌರ್ಜನ್ಯವನ್ನು ನಮ್ಮ ಬೆಳ್ತಂಗಡಿ ವಕೀಲರ ಸಂಘ ಅತ್ಯಂತ ತೀವ್ರವಾಗಿ ಖಂಡಿಸುತ್ತದೆ.
ಈ ರೀತಿ ಅಮಾನುಷ ಮತ್ತು ಕಾನೂನುಬಾಹಿರ ಕೃತ್ಯದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಪೋಲೀಸರನ್ನು ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿಯೂ ಹಾಗೂ ಮುಂದೆಂದಿಗೂ ಇಂತಹ ಕೆಟ್ಟ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಾಗಿಯೂ ಈ ಮೂಲಕ ಆಗ್ರಹಿಸುತ್ತೇವೆ. ಹಾಗೂ ಇದಕ್ಕೆ ತಪ್ಪಿದ್ದಲ್ಲಿ ಮುಂದಕ್ಕೆ ಕಠಿಣ ಹೋರಾಟ ನಮಗೆ ಅನಿವಾರ್ಯವಾಗುತ್ತದೆ ಎಂಬುದಾಗಿಯೂ ಈ ಮೂಲಕ ತಿಳಿಯಪಡಿಸುತ್ತೇವೆ. ಎಂದು ಬೆಳ್ತಂಗಡಿ BAR association ವತಿಯಿಂದ ಮಾನ್ಯ ಮುಖ್ಯಮಂತ್ರಿಯವರಿಗೆ ಬೆಳ್ತಂಗಡಿ ತಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.