ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ.

ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು ಅವರ ಗದ್ದೆಯಲ್ಲಿ ಉತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮೀಣ ಕ್ರೀಡಾಕೂಟವನ್ನು ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು, ಭಕ್ತರು ಹಾಗೂ ಬಂಧು-ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಚಿರಂಜೀವಿ ಯುವಕ ಮಂಡಲದ ಸಂಘಟಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.






