ಬೆಳ್ತಂಗಡಿ, ಜು.16: ಚಿರಂಜೀವಿ ಯುವಕ ಮಂಡಲ ಕಾನರ್ಪ–ಕಡಿರುದ್ಯಾವರ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಯುವಕ ಮಂಡಲದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಲೋಕೇಶ್ ಪಣಿಕಲ್, ಕಾರ್ಯದರ್ಶಿಯಾಗಿ ಪ್ರವೀಣ್ ಮಂಗೆರಪಾಲು, ಉಪಾಧ್ಯಕ್ಷರಾಗಿ ನೀಲಯ್ಯ ಗೌಡ ಎಂ, ಜೊತೆ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೂಜಿ ಹಾಗೂ ಕೋಶಾಧಿಕಾರಿಯಾಗಿ ಚೆನ್ನಕೇಶವ ಕಾನರ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಚಿರಂಜೀವಿ ಯುವಕ ಮಂಡಲವು ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ತಾಲೂಕಿನ ಸಕ್ರಿಯ ಯುವಕ ಮಂಡಲಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಈ ಮಂಡಲವು ಸಾಮಾಜಿಕ ಕಳಕಳಿಯ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಗೌಡ, ಸಂಚಾಲಕ ರಾಮಚಂದ್ರ ಗೌಡ, ರವೀಂದ್ರ ಪೂಜಾರಿ, ಮೋಹನ್ ಗೌಡ, ಜಯರಾಜ್ ಸಾಲಿಯಾನ್ ಕಾನರ್ಪ, ರಾಜೇಶ್ ಎಂ. ಕಾನರ್ಪ, ಸಂಜೀವ ಗೌಡ ಪೂಜಿ, ಬಾಲಕೃಷ್ಣ ಗೌಡ, ಗುರುರಾಜ್ ಕೆ., ಯಶೋಧರ ಗೌಡ, ನಾಗೇಶ್ ಗೌಡ, ಜಯಂತ ಗೌಡ, ಚಂದ್ರಕಾಂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.





