ಚಿರಂಜೀವಿ ಯುವಕ ಮಂಡಲ ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದಿಂದ 33ನೇ ವರ್ಮೊಷದ ಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟ ಮತ್ತು ಶ್ರೀ ಕೃಷ್ಣ ಪೂಜೆ ಸಂಭ್ರಮ

ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ), ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಕಾರ್ಯಕ್ರಮವನ್ನು ಚಿರಂಜೀವಿ ಯುವಕ ಮಂಡಲ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಪೂಜೆ ಹಾಗೂ ಮೊಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟವನ್ನು ವಿಜಯ ಪೂಜಾರಿ ಕಾಜೂರು ರವರು ಉದ್ಘಾಟಿಸಿ ಶುಭಹಾರೈಸಿದರು.

ಶ್ರೀ ಕೃಷ್ಣ ವೇಷಧಾರಿ ಪುಟಾಣಿ ಮಕ್ಕಳು

ಸಮಾರೋಪ ಸಮಾರಂಭದಲ್ಲಿ ಗಣಪತಿ ಭಟ್ ಕುಳಮರ್ವ ಮಾತನಾಡುತ್ತಾ ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ. ಶ್ರೀ ಕೃಷ್ಣ ಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8ನೇ ಮಗನಾಗಿ ಜನಿಸಿದನು. ಶ್ರೀ ಕೃಷ್ಣ ಜನ್ಮಾಷ್ಟಮಿ ಕೇವಲ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ವೈದೀಕ ಆಚರಣೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಯುವ ಪೀಳಿಗೆಗೆ ಶ್ರೀ ಕೃಷ್ಣನ ಆದರ್ಶ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ಚಿರಂಜೀವಿ ಯುವಕ ಮಂಡಲ ನಿರಂತರ 33ವರ್ಷಗಳಿಂದ ಇಂತಹ ಕಾರ್ಯಕ್ರಮಗಳ ಜೊತೆಗೆ ವೈದೀಕ ಸ್ಪರ್ಶ ನೀಡುವುದು ಬಹಳ ಸಂತೋಷಕರ ಹೀಗೆ ನಿರಂತರವಾಗಿ ತಮ್ಮ ಕಾರ್ಯ ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಜಾರುಕಂಬ ಸ್ಪರ್ಧೆ

ಸಾಧಕರ ಸನ್ಮಾನ

ಸೈನಿಕರ ಹೆಸರಿನಲ್ಲಿ ಕಾರ್ಗಿಲ್ ವನ ನಿರ್ಮಾಣ ಮಾಡಿ ಕಾರ್ಗಿಲ್ ಹುತಾತ್ಮ ಯೋಧರ ನೆನಪಿನಲ್ಲಿ ವಿವಿಧ ಪ್ರಭೇದಗಳ 527 ಗಿಡನಾಟಿ ಮಾಡಿ ಪಾಲನೆ ಪೋಷಣೆ ಮಾಡುತ್ತಿರುವ ಸಚಿನ್ ಬಿಢೆ ಮುಂಡಾಜೆ ಹಾಗೂ ಸತತವಾಗಿ ಶೇಕಡಾ 100% ಫಲಿತಾಂಶದೊಂದಿಗೆ ಉತ್ತಮ ವಾತಾವರಣ ಕಲ್ಪಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಪ್ರೌಢಶಾಲೆ ಮಿತ್ತಭಾಗಿಲು ಇವುಗಳ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಗೌಡ ಬೆಳಾಲು ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು, ಮೋಹನ್ ಬಂಗೇರ ಕಾರಿಂಜ ಆಡಳಿತಾಧಿಕಾರಿಗಳು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೊಲ್ಲಿ, ಗೋಪಾಲಕೃಷ್ಣ ಸ.ಪ್ರೌ.ಶಾಲೆ ಮಿತ್ತಬಾಗಿಲು, ಸಚಿನ್ ಬಿಢೆ ಮುಂಡಾಜೆ, ರತ್ನಾವತಿ ಬಾಲಕೃಷ್ಣ ಅಧ್ಯಕ್ಷರು ಗ್ರಾ.ಪಂ ಕಡಿರುದ್ಯಾವರ, ದಾಜಮ್ಮ ಅಧ್ಯಕ್ಷರು ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ, ಯುವಕ ಮಂಡಲದ ಅಧ್ಯಕ್ಷರಾದ ಜರ್ನಾದನ ಕಾನರ್ಪ, ಬಾಲಕೃಷ್ಣಗೌಡ, ರಾಮಚಂದ್ರ ಗೌಡ, ಜಯರಾಜ್ ಸಾಲಿಯಾನ್, ಹರ್ಷನಾರಾಯಣ ಭಟ್, ರಾಘವೇಂದ್ರ ಭಟ್, ರವೀಂದ್ರ ಪೂಜಾರಿ, ಹಾಗೂ ಯುವಕ ಮಂಡಲದ ಸದಸ್ಯರು ಪಾಲ್ಗೊಂಡಿದ್ದರು.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 7 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 5 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ