ಚಿರಂಜೀವಿ ಯುವಕ ಮಂಡಲ ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದಿಂದ 33ನೇ ವರ್ಮೊಷದ ಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟ ಮತ್ತು ಶ್ರೀ ಕೃಷ್ಣ ಪೂಜೆ ಸಂಭ್ರಮ

ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ), ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಕಾರ್ಯಕ್ರಮವನ್ನು ಚಿರಂಜೀವಿ ಯುವಕ ಮಂಡಲ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಪೂಜೆ ಹಾಗೂ ಮೊಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟವನ್ನು ವಿಜಯ ಪೂಜಾರಿ ಕಾಜೂರು ರವರು ಉದ್ಘಾಟಿಸಿ ಶುಭಹಾರೈಸಿದರು.

ಶ್ರೀ ಕೃಷ್ಣ ವೇಷಧಾರಿ ಪುಟಾಣಿ ಮಕ್ಕಳು

ಸಮಾರೋಪ ಸಮಾರಂಭದಲ್ಲಿ ಗಣಪತಿ ಭಟ್ ಕುಳಮರ್ವ ಮಾತನಾಡುತ್ತಾ ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ. ಶ್ರೀ ಕೃಷ್ಣ ಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8ನೇ ಮಗನಾಗಿ ಜನಿಸಿದನು. ಶ್ರೀ ಕೃಷ್ಣ ಜನ್ಮಾಷ್ಟಮಿ ಕೇವಲ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ವೈದೀಕ ಆಚರಣೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಯುವ ಪೀಳಿಗೆಗೆ ಶ್ರೀ ಕೃಷ್ಣನ ಆದರ್ಶ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ಚಿರಂಜೀವಿ ಯುವಕ ಮಂಡಲ ನಿರಂತರ 33ವರ್ಷಗಳಿಂದ ಇಂತಹ ಕಾರ್ಯಕ್ರಮಗಳ ಜೊತೆಗೆ ವೈದೀಕ ಸ್ಪರ್ಶ ನೀಡುವುದು ಬಹಳ ಸಂತೋಷಕರ ಹೀಗೆ ನಿರಂತರವಾಗಿ ತಮ್ಮ ಕಾರ್ಯ ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಜಾರುಕಂಬ ಸ್ಪರ್ಧೆ

ಸಾಧಕರ ಸನ್ಮಾನ

ಸೈನಿಕರ ಹೆಸರಿನಲ್ಲಿ ಕಾರ್ಗಿಲ್ ವನ ನಿರ್ಮಾಣ ಮಾಡಿ ಕಾರ್ಗಿಲ್ ಹುತಾತ್ಮ ಯೋಧರ ನೆನಪಿನಲ್ಲಿ ವಿವಿಧ ಪ್ರಭೇದಗಳ 527 ಗಿಡನಾಟಿ ಮಾಡಿ ಪಾಲನೆ ಪೋಷಣೆ ಮಾಡುತ್ತಿರುವ ಸಚಿನ್ ಬಿಢೆ ಮುಂಡಾಜೆ ಹಾಗೂ ಸತತವಾಗಿ ಶೇಕಡಾ 100% ಫಲಿತಾಂಶದೊಂದಿಗೆ ಉತ್ತಮ ವಾತಾವರಣ ಕಲ್ಪಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಪ್ರೌಢಶಾಲೆ ಮಿತ್ತಭಾಗಿಲು ಇವುಗಳ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಗೌಡ ಬೆಳಾಲು ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು, ಮೋಹನ್ ಬಂಗೇರ ಕಾರಿಂಜ ಆಡಳಿತಾಧಿಕಾರಿಗಳು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೊಲ್ಲಿ, ಗೋಪಾಲಕೃಷ್ಣ ಸ.ಪ್ರೌ.ಶಾಲೆ ಮಿತ್ತಬಾಗಿಲು, ಸಚಿನ್ ಬಿಢೆ ಮುಂಡಾಜೆ, ರತ್ನಾವತಿ ಬಾಲಕೃಷ್ಣ ಅಧ್ಯಕ್ಷರು ಗ್ರಾ.ಪಂ ಕಡಿರುದ್ಯಾವರ, ದಾಜಮ್ಮ ಅಧ್ಯಕ್ಷರು ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ, ಯುವಕ ಮಂಡಲದ ಅಧ್ಯಕ್ಷರಾದ ಜರ್ನಾದನ ಕಾನರ್ಪ, ಬಾಲಕೃಷ್ಣಗೌಡ, ರಾಮಚಂದ್ರ ಗೌಡ, ಜಯರಾಜ್ ಸಾಲಿಯಾನ್, ಹರ್ಷನಾರಾಯಣ ಭಟ್, ರಾಘವೇಂದ್ರ ಭಟ್, ರವೀಂದ್ರ ಪೂಜಾರಿ, ಹಾಗೂ ಯುವಕ ಮಂಡಲದ ಸದಸ್ಯರು ಪಾಲ್ಗೊಂಡಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ