TRENDING
Next
Prev

ಭಯದಲ್ಲಿದ್ದ ನೆರೆ ಸಂತ್ರಸ್ತರಿಗೆ ಆಭಯ ನೀಡಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು ತಿಳಿಸಿದ್ದು ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10,000 ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಮತ್ತು ಭಾಗಶಃ ಹಾನಿಯಾಗಿದ್ದಲ್ಲಿ ಪರಿಶೀಲನೆ ನಡೆಸಿ ಹಾನಿಗೆ ತಕ್ಕಂತೆ ಪರಿಹಾರ ವಿತರಿಸಬೇಕು ಎಂದು ತಿಳಿಸಿದ್ದಾರೆ.

READ ALSO

ಹಳ್ಳಿಗಳಲ್ಲಿನ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳಾಗಿ ಮಾರ್ಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ.