ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 268 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ