ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್‌ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…

    Spread the love

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    You Missed

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 25 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 26 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 48 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 138 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 47 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 7 views