ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 53 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 41 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 28 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 232 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ