ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 5 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 12 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 8 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 12 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 21 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 40 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು