ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…

    Spread the love

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.…

    Spread the love

    You Missed

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 59 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 53 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 70 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 163 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 152 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 45 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ