ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 49 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 31 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 50 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 99 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 43 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views