ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 13 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ