ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ