ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 3 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 8 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 9 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 7 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 11 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 17 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ