ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು