ಇಂದು ವಿಶ್ವ ತೆಂಗಿನಕಾಯಿ ದಿನ ತೆಂಗಿನಕಾಯಿಯ ಮಹತ್ವ ತಿಳಿಯಲು ಇಲ್ಲಿ ಭೇಟಿ ನೀಡಿ

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು.

ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರವಾಗಿದೆ. ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬಹರಿದಿನಗಳಲ್ಲಿ ಇದರ ಬೇಡಿಕೆಯು ಬಹುಮುಖ್ಯವಾಗಿದೆ.

ತೆಂಗಿನ ಮರದ ಕಾಂಡ, ಗರಿ, ಕಾಯಿ, ನಾರು, ಕರಟಗಳನ್ನು ಬಳಸಿ ತಯಾರಿಸುವ ಆಕರ್ಷಕ ಕರಕುಶಲ ಉತ್ಪನ್ನಗಳು ಪೆನ್‌ ಸ್ಟ್ಯಾಂಡ್‌, ಗೃಹಾಲಂಕಾರ ವಸ್ತುಗಳು, ವಿವಿಧ ಕಲಾಕೃತಿಗಳು, ಹುರಿಹಗ್ಗ, ಕಾಲೊರೆಸುವ ಚಾಪೆಗಳು, ಚೀಲಗಳು, ಕರಟದ ಚಿಪ್ಪಿನ ಆಭರಣಗಳು, ಕ್ಲಿಪ್‌ ಗಳು ಇತ್ಯಾದಿ ಬಹುತೇಕರು ಅಡುಗೆಗಳಿಗೆ ತೆಂಗಿನೆಣ್ಣೆಯನ್ನೇ ಬಳಸುತ್ತಾರೆ. ತೆಂಗಿನೆಣ್ಣೆಯಲ್ಲಿ ಸಂತೃಪ್ತ ಕೊಬ್ಬಿನ ಅಂಶ ಜಾಸ್ತಿ ಇದೆಯೆಂದೂ, ಅದು ಹೃದಯಾಘಾತವನ್ನು ಹೆಚ್ಚಿಸುತ್ತದೆಯೆಂದೂ ಇತರ ಖಾದ್ಯತೈಲ ಉತ್ಪಾದಕ ಸಂಸ್ಥೆಗಳು ಪ್ರಚಾರಮಾಡುತ್ತಿವೆ. ಇದರಲ್ಲಿ ಸತ್ಯಾಂಶಕ್ಕಿಂತಲೂ ವ್ಯಾವಹಾರಿಕ ದೃಷ್ಟಿಕೋನವೇ ಹೆಚ್ಚು ಎಂಬುದು ಇತ್ತೀಚೆಗೆ ವೇದ್ಯವಾಗುತ್ತಿದೆ. ತೆಂಗಿನೆಣ್ಣೆಯು ಚರ್ಮದ ಶುಷ್ಕತೆಯನ್ನು ಕಡಿಮೆಮಾಡುವುದರೊಂದಿಗೆ ಕೆಲವು ಸೋಂಕುಗಳನ್ನೂ ನಿವಾರಿಸುವ ಸಾಮರ್ಥ್ಯ ಹೊಂದಿದೆ. ಹೆಚ್ಚಿನ ಮಂದಿ ಅಡುಗೆಗೂ, ತಲೆ-ಮೈಗೆ ಹಚ್ಚಿಕೊಳ್ಳಲೂ ತೆಂಗಿನ ಎಣ್ಣೆಯನ್ನೇ ಬಳಸಿ ಆರೋಗ್ಯದಿಂದಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಹೀಗೆ ತೆಂಗಿನಮರದ ಪ್ರತಿ ಭಾಗಗಳೂ, ಪ್ರತಿಹಂತದಲ್ಲಿಯೂ ಉಪಯುಕ್ತವಾಗಿದ್ದು, ಬಯಸಿದ್ದನ್ನೆಲ್ಲ ಕೊಡುವ ಮರ ಎಂಬ ಅರ್ಥದಲ್ಲಿ ಕಲ್ಪವೃಕ್ಷವೆಂದೂ ಕರೆಯಲ್ಪಡುತ್ತದೆ. ಏಷ್ಯಾದ ವಿವಿಧ ದೇಶಗಳ ಆರ್ಥಿಕ ಬೆಳವಣಿಗೆಗೆ ತೆಂಗಿನಕಾಯಿ ಬೆಳೆಯನ್ನು ಪೋ›ತ್ಸಾಹಿಸುವ ನಿಟ್ಟಿನಲ್ಲಿ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ, ಏಷ್ಯಾ-ಫೆಸಿಫಿಕ್‌ ದೇಶಗಳ ತೆಂಗಿನಕಾಯಿ ಸಮುದಾಯ ಮಂಡಳಿಯನ್ನು ರಚಿಸಿ, ಸೆಪ್ಟೆಂಬರ್‌ 2 ರಂದು “ವಿಶ್ವ ತೆಂಗಿನಕಾಯಿ ದಿನ’ ಎಂದು ಘೋಷಿಸಿದ್ದಾರೆ.

ಎಪಿಸಿಸಿ 18 ಸದಸ್ಯ ರಾಷ್ಟ್ರಗಳ ಅಂತರ್-ಸರ್ಕಾರಿ ಸಂಸ್ಥೆಯಾಗಿದ್ದು, ಇದು ಏಷ್ಯನ್ ಪೆಸಿಫಿಕ್ ಪ್ರದೇಶದ ಗರಿಷ್ಠ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲು ತೆಂಗಿನಕಾಯಿ ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸಲು, ಸಂಘಟಿಸಲು ಮತ್ತು ಸಮನ್ವಯಗೊಳಿಸುವ ಉದ್ದೇಶ ಹೊಂದಿದೆ. ಎಪಿಸಿಸಿಯ ಸ್ಥಾಪಕ ಸದಸ್ಯರಲ್ಲಿ ಭಾರತ ಕೂಡ ಒಂದು. ಭಾರತದಲ್ಲಿ, ತೆಂಗಿನಕಾಯಿ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ ಪ್ರತಿ ವರ್ಷ ವಿಶ್ವ ತೆಂಗಿನ ದಿನವನ್ನು ದೇಶಾದ್ಯಂತ ತೆಂಗಿನಕಾಯಿ ಬೆಳೆಯುವ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ.

‘ಅಂತಾರಾಷ್ಟ್ರೀಯ ತೆಂಗಿನಕಾಯಿ ಸಮುದಾಯ’ (ವಿಶ್ವದ ತೆಂಗಿನಕಾಯಿ ಉತ್ಪಾದಿಸುವ ದೇಶಗಳ ಸಂಘಟನೆ) ಘೋಷಿಸಿದಂತೆ ಈ ವರ್ಷ ವಿಶ್ವ ತೆಂಗಿನ ದಿನಾಚರಣೆಯ ವಿಷಯವು ‘ಜಗತ್ತನ್ನು ಉಳಿಸಲು ತೆಂಗಿನಕಾಯಿ ಉದ್ದಿಮೆಯಲ್ಲಿ ಹೂಡಿಕೆ ಮಾಡಿ’ ಎಂಬ ಧ್ಯೇಯ ಹೊಂದಿದೆ. ಮುಖ್ಯವಾಗಿ ತೆಂಗಿನಕಾಯಿಯ ವೈಜ್ಞಾನಿಕ ಹೆಸರು ಕೊಕೊಸ್ ನ್ಯೂಸಿಫೆರಾ. ಇದರಲ್ಲಿ ಕ್ಯಾಲೋರಿ ಪ್ರಮಾಣ 283 ಕೆ.ಸಿ.ಎಲ್, ಕೊಬ್ಬಿನಾಂಶ (76.54%), ಮ್ಯಾಂಗನೀಸ್ (52.17%), ತಾಮ್ರ (38.67%), ಕಬ್ಬಿಣ (24.25%), ಒಟ್ಟು ಆಹಾರದ ಫೈಬರ್ (18.95%), ಸೆಲೆನಿಯಮ್, ಸೆ 8.1ಮಿ.ಗ್ರಾ. (14.73%), ರಂಜಕ, ಪಿ 90 ಮಿ.ಗ್ರಾಂ. (12.86%), ಕಾರ್ಬೋಹೈಡ್ರೇಟ್ 12.18 ಗ್ರಾಂ (9.37%), ಸತು, Zn 0.88 ಮಿ.ಗ್ರಾ, (8.00%), ವ್ಯಾಲಿನ್ 0.162 ಗ್ರಾಂ (7.67%) ಹೊಂದಿದೆ.

ತೆಂಗಿನಕಾಯಿಯು ಆರೋಗ್ಯಕ್ಕೆ ಉತ್ತಮವಾಗಿದ್ದು, ತೂಕ ನಿರ್ವಹಣೆ, ಸಕ್ಕರೆ ಕಾಯಿಲೆ ನಿಯಂತ್ರಣ, ಜೀರ್ಣಕ್ರಿಯೆಯ ಸುಧಾರಣೆ, ಚರ್ಮದ ಸೋಂಕು ತಡೆ, ಕೂದಲಿನ ಬೆಳವಣಿಗೆಗೆ ಉತ್ತೇಜನ, ಮೂಳೆ ಆರೋಗ್ಯ, ಹಲ್ಲಿನ ಆರೈಕೆ, ಒತ್ತಡ ನಿವಾರಣೆ ಮಾಡುತ್ತದೆ. ತೆಂಗಿನಕಾಯಿಯನ್ನು ವಿಶ್ವದಾದ್ಯಂತ 90ಕ್ಕೂ ಹೆಚ್ಚು ದೇಶಗಳಲ್ಲಿ ಬೆಳೆಯಲಾಗುತ್ತದೆ. ತೆಂಗಿನ ತೋಟವನ್ನು ಸ್ಥಾಪಿಸುವುದು ತುಂಬಾ ಕಷ್ಟವಾದರೂ ಅದನ್ನು ಒಮ್ಮೆ ಬೆಳದ ನಂತರ, ವರ್ಷಪೂರ್ತಿ ತೆಂಗಿನಕಾಯಿ ಕೊಯ್ಲು ಮಾಡುವುದರಿಂದ ಇದು ಸಾಕಷ್ಟು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ತೆಂಗಿನಕಾಯಿಯ ವಿಶ್ವ ಉತ್ಪಾದನೆಯು ವಾರ್ಷಿಕವಾಗಿ ಸುಮಾರು 55 ದಶಲಕ್ಷ ಟನ್‌ಗಳಷ್ಟಿದೆ.

ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ವಿಶ್ವದ ತೆಂಗಿನ ಹಣ್ಣುಗಳನ್ನು ಉತ್ಪಾದಿಸುವ ಪ್ರಮುಖ ರಾಷ್ಟ್ರಗಳಾಗಿವೆ. ಇಂಡೋನೇಷ್ಯಾದಲ್ಲಿ 183,000,000 ಟನ್, ಫಿಲಿಪೈನ್ಸ್​ನಲ್ಲಿ 153,532,000 ಟನ್, ಭಾರತದಲ್ಲಿ 119,300,000 ಟನ್ ಬೆಳಯಲಾಗುತ್ತದೆ. ಇನ್ನು ಇಂಡೋನೇಷ್ಯಾ ವಿಶ್ವದ ಅತಿದೊಡ್ಡ ತೆಂಗಿನಕಾಯಿ ರಫ್ತುದಾರನಾಗಿದ್ದು, ರಫ್ತು ಪ್ರಮಾಣ 290 ಸಾವಿರ ಟನ್‌ಗಳಷ್ಟಿದೆ. ಥೈಲ್ಯಾಂಡ್ (70 ಸಾವಿರ ಟನ್) ಶ್ರೇಯಾಂಕದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ನಂತರ ವಿಯೆಟ್ನಾಂ 57 ಸಾವಿರ ಟನ್. ಈ ಎಲ್ಲಾ ದೇಶಗಳು ಒಟ್ಟಾಗಿ ಒಟ್ಟು ರಫ್ತಿನ 23% ಪಾಲನ್ನು ಹೊಂದಿವೆ. ಇನ್ನು ಭಾರತ 11 ಸಾವಿರ ಟನ್ ರಫ್ತು ಮಾಡುತ್ತದೆ. 2018ರಲ್ಲಿ ಥೈಲ್ಯಾಂಡ್ 210 ಸಾವಿರ ಟನ್ ಮತ್ತು ಮಲೇಷ್ಯಾ 199 ಸಾವಿರ ಟನ್ ತೆಂಗಿನಕಾಯಿಯನ್ನು ಆಮದು ಮಾಡಿಕೊಂಡಿದೆ. ಒಟ್ಟು ಆಮದುಗಳಲ್ಲಿ ಕ್ರಮವಾಗಿ 31% ಮತ್ತು 30%. ಒಟ್ಟು ಆಮದುಗಳ ವಿಷಯದಲ್ಲಿ ಚೀನಾ (60 ಸಾವಿರ ಟನ್) 9% ಪಾಲನ್ನು ಹೊಂದಿದ್ದು, ಯು.ಎಸ್ (5.7%) ನಂತರದ ಸ್ಥಾನದಲ್ಲಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (27 ಸಾವಿರ ಟನ್), ನೆದರ್ಲ್ಯಾಂಡ್ಸ್ (19 ಸಾವಿರ ಟನ್) ಮತ್ತು ಸಿಂಗಾಪುರ (11 ಸಾವಿರ ಟನ್) ಆಮದು ಮಾಡಿಕೊಂಡಿದೆ. ವಿಶ್ವದ ಪ್ರಮುಖ ತೆಂಗಿನಕಾಯಿ ಉತ್ಪಾದಿಸುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ವಾರ್ಷಿಕ ತೆಂಗಿನ ಉತ್ಪಾದನೆಯು 20.82 ಲಕ್ಷ ಹೆಕ್ಟೇರ್‌ಗೆ 2395 ಕೋಟಿ ತೆಂಗಿನಕಾಯಿ ಬೆಳೆಯಲಾಗುತ್ತದೆ.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 73 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views