BIG NEWS: ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿ ನೀಡಿದ ರಾಜ್ಯ ಕಾಂಗ್ರೆಸ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವದಿಂದಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡಿ ತೋರಿಸುವಂತಾಗಿದೆ. ಲಸಿಕೆಯ ಅಭಾವದಿಂದ ರಾಜ್ಯ ತತ್ತಿರಿಸಿರುವ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಹರಿಸಿದ್ರು.

ಜನರ ಜೀವ ಉಳಿಸೋದು ಕಾಂಗ್ರೆಸ್​ನ ಕರ್ತವ್ಯವಾಗಿದೆ. ಹೀಗಾಗಿ ನಾವು ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿಯನ್ನ ನೀಡಲಿದ್ದೇವೆ. ಸಿಎಂ, ಡಿಸಿಎಂ ಸೇರಿದಂತೆ ವಿವಿಧ ಸಚಿವರು ಜಾಗತಿಕ ಟೆಂಡರ್​ ಮೂಲಕ ಲಸಿಕೆ ಖರೀದಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಲಸಿಕೆ ಖರೀದಿಯ ಪ್ರತಿಯೊಂದು ವ್ಯವಹಾರವನ್ನೂ ರಾಜ್ಯ ಸರ್ಕಾರ ಪಾರದರ್ಶಕವಾಗಿ ಇಡಬೇಕು. ಸಿಎಂ ಬಿಎಸ್​ವೈ ಅವರ ಕಣ್ಮುಚ್ಚಿಸಿ ಅವರ ಕೆಳಗಿನವರು ಅಕ್ರಮ ಮಾಡ್ತಿದ್ದಾರೆ.

ಆದರೆ ನಮ್ಮ ಹಾಗೂ ಜನತೆಯ ಮುಂದೆ ಲಸಿಕೆ ಖರೀದಿಯ ಪಾರದರ್ಶಕ ವ್ಯವಹಾರವನ್ನ ನೀಡಲೇಬೇಕು ಎಂದು ಆಗ್ರಹಿಸಿದರು.

ಪ್ರತಿಯೊಂದು ಶಾಸಕ ಹಾಗೂ ಸಂಸದರಿಗೆ ಕ್ಷೇತ್ರ ಅಭಿವೃದ್ಧಿಗೆಂದು 2 ಕೋಟಿ ರೂಪಾಯಿ ಹಣವನ್ನ ನೀಡಲಾಗುತ್ತದೆ. ಈ ಅಭಿವೃದ್ಧಿ ಹಣದಲ್ಲಿ ತಲಾ 1 ಕೋಟಿ ರೂಪಾಯಿಯನ್ನ ನೀಡಲು ರಾಜ್ಯ ಕಾಂಗ್ರೆಸ್​ ನಿರ್ಧರಿಸಿದೆ. ಕಾಂಗ್ರೆಸ್​ನ 95 ಶಾಸಕರು ಹಾಗೂ ಓರ್ವ ಸಂಸದರಿಂದ ತಲಾ 1 ಕೋಟಿ ರೂಪಾಯಿ ಹಣವನ್ನ ಕಾಂಗ್ರೆಸ್​ ಲಸಿಕೆ ಖರೀದಿಗೆ ನೀಡಲಿದೆ. ಇದರ ಜೊತೆಯಲ್ಲಿ ಸಂಸದ ಹಾಗೂ ರಾಜ್ಯ ಸಭಾ ಸದಸ್ಯರಿಂದ ತಲಾ 5 ಕೋಟಿ ಹಣವನ್ನೂ ಕಾಂಗ್ರೆಸ್​ ನೀಡಲಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 10 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ