ತಾಮ್ರದ ಲೋಟದಲ್ಲಿ ನೀರು ಕುಡಿದರೇ ಏನಾಗುತ್ತೆ!? ಹಲವು ಮಾರಕ ಕಾಯಿಲೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಬಹುದೇ

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ. ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.
ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.

4 ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದ

7.ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ