ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕೃತಕ ಬಣ್ಣ ಹಾಗೂ ಹಾನಿಕಾರಕ ರಾಸಾಯನಿಕ ಬಳಸಿರುವುದು ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಕಾಟನ್‌ ಕ್ಯಾಂಡಿಗೆ ನಿಷೇಧ ಹೇರಲಾಗಿದೆ.

ತಮಿಳುನಾಡು ಸರಕಾರ ಈಗಾಗಲೇ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಮಾರಾಟ ಮಾಡದಂತೆ ನಿಷೇಧ ಹೇರಿದೆ. ಕರ್ನಾಟಕ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗವು, ಪರಿಶೀಲನೆ ನಡೆಸಿದ ವೇಳೆಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಒಟ್ಟು 171 ಕಡೆಗಳಲ್ಲಿ ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಲಾಗಿದ್ರೆ, ಈ ಪೈಕಿ 107 ಕಡೆಗಳ ಮಾದರಿಯಲ್ಲಿ ಹಾನಿಕಾರಕ ಬಣ್ಣ ಇರುವುದು ಪತ್ತೆಯಾಗಿದೆ.ಇದೇ ರೀತಿಯಲ್ಲಿ ಕಾಟನ್‌ ಕ್ಯಾಂಡಿಯ ಮಾದರಿಯನ್ನು ಕೂಡ ಸಂಗ್ರಹ ಮಾಡಲಾಗಿದೆ. ರೋಡಮೈನ್ ಬೀ, ಟಾಟ್ರಾಸೈನ್ ಹಾನಿಕಾರಕ ಅಂಶ ಇರುವುದು ದೃಢಪಟ್ಟಿದೆ. ರೋಡಮೈನ್ ಬೀ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ. ಕಾಟನ್‌ ಕ್ಯಾಂಡಿಯಲ್ಲಿ ಪಿಂಕ್‌ ಬಣ್ಣ ಬರಬೇಕು ಅನ್ನೋ ಕಾರಣದಿಂದಲೇ ರೋಡಮೈನ್ ಬೀ ಬಳಕೆ ಮಾಡುತ್ತಾರೆ.

ಆದರೆ ಇನ್ನುಂದೆ ಯಾವುದೇ ಕಾರಣಕ್ಕೂ ಕಾಟನ್‌ ಕ್ಯಾಂಡಿಯನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಿದೆ. ಸರಕಾರದ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಟನ್‌ ಕ್ಯಾಂಡಿ ಮಾತ್ರವಲ್ಲದೇ ಗೋಬಿ ಮಂಚೂರಿಯಲ್ಲಿಯೂ ಹಾನಿಕಾರಕ ಅಂಶ ಪತ್ತೆಯಾಗಿದೆ.ಗೋಬಿ ಮಂಚೂರಿಯನ್ನು ಆಹಾರವಾಗಿ ಸೇವಿಸುತ್ತಾರೆ. ಆದರೆ ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಕಲರ್‌ ಬಳಕೆ ಮಾಡುತ್ತಾರೆ. ಗೋಬಿ ಮಂಚೂರಿ ಯಲ್ಲಿ ಬಳಕೆ ಮಾಡುವ ಬಣ್ಣದಲ್ಲಿ ಟಾಟ್ರಾಸೈನ್ ಒಳಗೊಂಡಿದೆ. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಬಣ್ಣ ಬಳಕೆ ಮಾಡದೇ ಗೋಬಿ ಮಂಚೂರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Spread the love

Related Posts

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

Spread the love

ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

Spread the love

You Missed

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

  • By admin
  • October 15, 2025
  • 17 views
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

  • By admin
  • October 13, 2025
  • 17 views
ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

  • By admin
  • October 12, 2025
  • 42 views
ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

  • By admin
  • October 11, 2025
  • 37 views
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

  • By admin
  • October 7, 2025
  • 59 views
ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

  • By admin
  • October 7, 2025
  • 57 views
ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ