ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕೃತಕ ಬಣ್ಣ ಹಾಗೂ ಹಾನಿಕಾರಕ ರಾಸಾಯನಿಕ ಬಳಸಿರುವುದು ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಕಾಟನ್‌ ಕ್ಯಾಂಡಿಗೆ ನಿಷೇಧ ಹೇರಲಾಗಿದೆ.

ತಮಿಳುನಾಡು ಸರಕಾರ ಈಗಾಗಲೇ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಮಾರಾಟ ಮಾಡದಂತೆ ನಿಷೇಧ ಹೇರಿದೆ. ಕರ್ನಾಟಕ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗವು, ಪರಿಶೀಲನೆ ನಡೆಸಿದ ವೇಳೆಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಒಟ್ಟು 171 ಕಡೆಗಳಲ್ಲಿ ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಲಾಗಿದ್ರೆ, ಈ ಪೈಕಿ 107 ಕಡೆಗಳ ಮಾದರಿಯಲ್ಲಿ ಹಾನಿಕಾರಕ ಬಣ್ಣ ಇರುವುದು ಪತ್ತೆಯಾಗಿದೆ.ಇದೇ ರೀತಿಯಲ್ಲಿ ಕಾಟನ್‌ ಕ್ಯಾಂಡಿಯ ಮಾದರಿಯನ್ನು ಕೂಡ ಸಂಗ್ರಹ ಮಾಡಲಾಗಿದೆ. ರೋಡಮೈನ್ ಬೀ, ಟಾಟ್ರಾಸೈನ್ ಹಾನಿಕಾರಕ ಅಂಶ ಇರುವುದು ದೃಢಪಟ್ಟಿದೆ. ರೋಡಮೈನ್ ಬೀ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ. ಕಾಟನ್‌ ಕ್ಯಾಂಡಿಯಲ್ಲಿ ಪಿಂಕ್‌ ಬಣ್ಣ ಬರಬೇಕು ಅನ್ನೋ ಕಾರಣದಿಂದಲೇ ರೋಡಮೈನ್ ಬೀ ಬಳಕೆ ಮಾಡುತ್ತಾರೆ.

ಆದರೆ ಇನ್ನುಂದೆ ಯಾವುದೇ ಕಾರಣಕ್ಕೂ ಕಾಟನ್‌ ಕ್ಯಾಂಡಿಯನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಿದೆ. ಸರಕಾರದ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಟನ್‌ ಕ್ಯಾಂಡಿ ಮಾತ್ರವಲ್ಲದೇ ಗೋಬಿ ಮಂಚೂರಿಯಲ್ಲಿಯೂ ಹಾನಿಕಾರಕ ಅಂಶ ಪತ್ತೆಯಾಗಿದೆ.ಗೋಬಿ ಮಂಚೂರಿಯನ್ನು ಆಹಾರವಾಗಿ ಸೇವಿಸುತ್ತಾರೆ. ಆದರೆ ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಕಲರ್‌ ಬಳಕೆ ಮಾಡುತ್ತಾರೆ. ಗೋಬಿ ಮಂಚೂರಿ ಯಲ್ಲಿ ಬಳಕೆ ಮಾಡುವ ಬಣ್ಣದಲ್ಲಿ ಟಾಟ್ರಾಸೈನ್ ಒಳಗೊಂಡಿದೆ. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಬಣ್ಣ ಬಳಕೆ ಮಾಡದೇ ಗೋಬಿ ಮಂಚೂರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Spread the love

Related Posts

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

Spread the love

ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

Spread the love

You Missed

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

  • By admin
  • April 23, 2025
  • 83 views
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

  • By admin
  • April 20, 2025
  • 46 views
ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

  • By admin
  • April 19, 2025
  • 175 views
ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

  • By admin
  • April 18, 2025
  • 184 views
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

  • By admin
  • April 9, 2025
  • 88 views
ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

  • By admin
  • April 8, 2025
  • 108 views
ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ