ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕೃತಕ ಬಣ್ಣ ಹಾಗೂ ಹಾನಿಕಾರಕ ರಾಸಾಯನಿಕ ಬಳಸಿರುವುದು ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಕಾಟನ್‌ ಕ್ಯಾಂಡಿಗೆ ನಿಷೇಧ ಹೇರಲಾಗಿದೆ.

ತಮಿಳುನಾಡು ಸರಕಾರ ಈಗಾಗಲೇ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಮಾರಾಟ ಮಾಡದಂತೆ ನಿಷೇಧ ಹೇರಿದೆ. ಕರ್ನಾಟಕ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗವು, ಪರಿಶೀಲನೆ ನಡೆಸಿದ ವೇಳೆಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಒಟ್ಟು 171 ಕಡೆಗಳಲ್ಲಿ ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಲಾಗಿದ್ರೆ, ಈ ಪೈಕಿ 107 ಕಡೆಗಳ ಮಾದರಿಯಲ್ಲಿ ಹಾನಿಕಾರಕ ಬಣ್ಣ ಇರುವುದು ಪತ್ತೆಯಾಗಿದೆ.ಇದೇ ರೀತಿಯಲ್ಲಿ ಕಾಟನ್‌ ಕ್ಯಾಂಡಿಯ ಮಾದರಿಯನ್ನು ಕೂಡ ಸಂಗ್ರಹ ಮಾಡಲಾಗಿದೆ. ರೋಡಮೈನ್ ಬೀ, ಟಾಟ್ರಾಸೈನ್ ಹಾನಿಕಾರಕ ಅಂಶ ಇರುವುದು ದೃಢಪಟ್ಟಿದೆ. ರೋಡಮೈನ್ ಬೀ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ. ಕಾಟನ್‌ ಕ್ಯಾಂಡಿಯಲ್ಲಿ ಪಿಂಕ್‌ ಬಣ್ಣ ಬರಬೇಕು ಅನ್ನೋ ಕಾರಣದಿಂದಲೇ ರೋಡಮೈನ್ ಬೀ ಬಳಕೆ ಮಾಡುತ್ತಾರೆ.

ಆದರೆ ಇನ್ನುಂದೆ ಯಾವುದೇ ಕಾರಣಕ್ಕೂ ಕಾಟನ್‌ ಕ್ಯಾಂಡಿಯನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಿದೆ. ಸರಕಾರದ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಟನ್‌ ಕ್ಯಾಂಡಿ ಮಾತ್ರವಲ್ಲದೇ ಗೋಬಿ ಮಂಚೂರಿಯಲ್ಲಿಯೂ ಹಾನಿಕಾರಕ ಅಂಶ ಪತ್ತೆಯಾಗಿದೆ.ಗೋಬಿ ಮಂಚೂರಿಯನ್ನು ಆಹಾರವಾಗಿ ಸೇವಿಸುತ್ತಾರೆ. ಆದರೆ ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಕಲರ್‌ ಬಳಕೆ ಮಾಡುತ್ತಾರೆ. ಗೋಬಿ ಮಂಚೂರಿ ಯಲ್ಲಿ ಬಳಕೆ ಮಾಡುವ ಬಣ್ಣದಲ್ಲಿ ಟಾಟ್ರಾಸೈನ್ ಒಳಗೊಂಡಿದೆ. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಬಣ್ಣ ಬಳಕೆ ಮಾಡದೇ ಗೋಬಿ ಮಂಚೂರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Spread the love

Related Posts

ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

Spread the love

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

Spread the love

You Missed

ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

  • By admin
  • April 30, 2026
  • 200 views
ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

  • By admin
  • April 29, 2026
  • 44 views
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

  • By admin
  • April 29, 2026
  • 50 views
ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

  • By admin
  • April 29, 2026
  • 109 views
ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

  • By admin
  • April 29, 2026
  • 46 views
ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

  • By admin
  • April 28, 2026
  • 88 views
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ