ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕೃತಕ ಬಣ್ಣ ಹಾಗೂ ಹಾನಿಕಾರಕ ರಾಸಾಯನಿಕ ಬಳಸಿರುವುದು ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಕಾಟನ್‌ ಕ್ಯಾಂಡಿಗೆ ನಿಷೇಧ ಹೇರಲಾಗಿದೆ.

ತಮಿಳುನಾಡು ಸರಕಾರ ಈಗಾಗಲೇ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಮಾರಾಟ ಮಾಡದಂತೆ ನಿಷೇಧ ಹೇರಿದೆ. ಕರ್ನಾಟಕ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗವು, ಪರಿಶೀಲನೆ ನಡೆಸಿದ ವೇಳೆಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಒಟ್ಟು 171 ಕಡೆಗಳಲ್ಲಿ ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಲಾಗಿದ್ರೆ, ಈ ಪೈಕಿ 107 ಕಡೆಗಳ ಮಾದರಿಯಲ್ಲಿ ಹಾನಿಕಾರಕ ಬಣ್ಣ ಇರುವುದು ಪತ್ತೆಯಾಗಿದೆ.ಇದೇ ರೀತಿಯಲ್ಲಿ ಕಾಟನ್‌ ಕ್ಯಾಂಡಿಯ ಮಾದರಿಯನ್ನು ಕೂಡ ಸಂಗ್ರಹ ಮಾಡಲಾಗಿದೆ. ರೋಡಮೈನ್ ಬೀ, ಟಾಟ್ರಾಸೈನ್ ಹಾನಿಕಾರಕ ಅಂಶ ಇರುವುದು ದೃಢಪಟ್ಟಿದೆ. ರೋಡಮೈನ್ ಬೀ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ. ಕಾಟನ್‌ ಕ್ಯಾಂಡಿಯಲ್ಲಿ ಪಿಂಕ್‌ ಬಣ್ಣ ಬರಬೇಕು ಅನ್ನೋ ಕಾರಣದಿಂದಲೇ ರೋಡಮೈನ್ ಬೀ ಬಳಕೆ ಮಾಡುತ್ತಾರೆ.

ಆದರೆ ಇನ್ನುಂದೆ ಯಾವುದೇ ಕಾರಣಕ್ಕೂ ಕಾಟನ್‌ ಕ್ಯಾಂಡಿಯನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಿದೆ. ಸರಕಾರದ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಟನ್‌ ಕ್ಯಾಂಡಿ ಮಾತ್ರವಲ್ಲದೇ ಗೋಬಿ ಮಂಚೂರಿಯಲ್ಲಿಯೂ ಹಾನಿಕಾರಕ ಅಂಶ ಪತ್ತೆಯಾಗಿದೆ.ಗೋಬಿ ಮಂಚೂರಿಯನ್ನು ಆಹಾರವಾಗಿ ಸೇವಿಸುತ್ತಾರೆ. ಆದರೆ ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಕಲರ್‌ ಬಳಕೆ ಮಾಡುತ್ತಾರೆ. ಗೋಬಿ ಮಂಚೂರಿ ಯಲ್ಲಿ ಬಳಕೆ ಮಾಡುವ ಬಣ್ಣದಲ್ಲಿ ಟಾಟ್ರಾಸೈನ್ ಒಳಗೊಂಡಿದೆ. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಬಣ್ಣ ಬಳಕೆ ಮಾಡದೇ ಗೋಬಿ ಮಂಚೂರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ