ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಕೃತಕ ಬಣ್ಣ ಹಾಗೂ ಹಾನಿಕಾರಕ ರಾಸಾಯನಿಕ ಬಳಸಿರುವುದು ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಕಾಟನ್‌ ಕ್ಯಾಂಡಿಗೆ ನಿಷೇಧ ಹೇರಲಾಗಿದೆ.

ತಮಿಳುನಾಡು ಸರಕಾರ ಈಗಾಗಲೇ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಮಾರಾಟ ಮಾಡದಂತೆ ನಿಷೇಧ ಹೇರಿದೆ. ಕರ್ನಾಟಕ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗವು, ಪರಿಶೀಲನೆ ನಡೆಸಿದ ವೇಳೆಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಒಟ್ಟು 171 ಕಡೆಗಳಲ್ಲಿ ಗೋಬಿ ಮಂಚೂರಿಯ ಮಾದರಿಯನ್ನು ಸಂಗ್ರಹಿಸಲಾಗಿದ್ರೆ, ಈ ಪೈಕಿ 107 ಕಡೆಗಳ ಮಾದರಿಯಲ್ಲಿ ಹಾನಿಕಾರಕ ಬಣ್ಣ ಇರುವುದು ಪತ್ತೆಯಾಗಿದೆ.ಇದೇ ರೀತಿಯಲ್ಲಿ ಕಾಟನ್‌ ಕ್ಯಾಂಡಿಯ ಮಾದರಿಯನ್ನು ಕೂಡ ಸಂಗ್ರಹ ಮಾಡಲಾಗಿದೆ. ರೋಡಮೈನ್ ಬೀ, ಟಾಟ್ರಾಸೈನ್ ಹಾನಿಕಾರಕ ಅಂಶ ಇರುವುದು ದೃಢಪಟ್ಟಿದೆ. ರೋಡಮೈನ್ ಬೀ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ. ಕಾಟನ್‌ ಕ್ಯಾಂಡಿಯಲ್ಲಿ ಪಿಂಕ್‌ ಬಣ್ಣ ಬರಬೇಕು ಅನ್ನೋ ಕಾರಣದಿಂದಲೇ ರೋಡಮೈನ್ ಬೀ ಬಳಕೆ ಮಾಡುತ್ತಾರೆ.

ಆದರೆ ಇನ್ನುಂದೆ ಯಾವುದೇ ಕಾರಣಕ್ಕೂ ಕಾಟನ್‌ ಕ್ಯಾಂಡಿಯನ್ನು ಮಾರಾಟ ಮಾಡುವಂತಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಿದೆ. ಸರಕಾರದ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಾಟನ್‌ ಕ್ಯಾಂಡಿ ಮಾತ್ರವಲ್ಲದೇ ಗೋಬಿ ಮಂಚೂರಿಯಲ್ಲಿಯೂ ಹಾನಿಕಾರಕ ಅಂಶ ಪತ್ತೆಯಾಗಿದೆ.ಗೋಬಿ ಮಂಚೂರಿಯನ್ನು ಆಹಾರವಾಗಿ ಸೇವಿಸುತ್ತಾರೆ. ಆದರೆ ಗೋಬಿ ಮಂಚೂರಿಯಲ್ಲಿ ಹಾನಿಕಾರಕ ಕಲರ್‌ ಬಳಕೆ ಮಾಡುತ್ತಾರೆ. ಗೋಬಿ ಮಂಚೂರಿ ಯಲ್ಲಿ ಬಳಕೆ ಮಾಡುವ ಬಣ್ಣದಲ್ಲಿ ಟಾಟ್ರಾಸೈನ್ ಒಳಗೊಂಡಿದೆ. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಬಣ್ಣ ಬಳಕೆ ಮಾಡದೇ ಗೋಬಿ ಮಂಚೂರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Spread the love

Related Posts

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

Spread the love

30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

Spread the love

You Missed

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

  • By admin
  • July 29, 2026
  • 6 views
ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

  • By admin
  • July 29, 2026
  • 6 views
30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

  • By admin
  • July 25, 2026
  • 11 views
ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

  • By admin
  • July 24, 2026
  • 7 views
ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  • By admin
  • July 24, 2026
  • 8 views
ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  • By admin
  • July 23, 2026
  • 9 views
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ