COVID 19ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿದ ಖದೀಮರು! ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಗೋ ಕಳ್ಳರು!

ಬೆಳ್ತಂಗಡಿ : ಚಿಕನ್ ಸೆಂಟರ್ ಹೆಸರಿನಲ್ಲಿ COVID 19 ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಗೋ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ಭೀಮನ ಅಮವಾಸ್ಯೆ ದಿನ ಮುಂಜಾನೆ ಮೂರು ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಸುರ್ಯ ಪಡ್ಪು ಗೋ ವ್ಯಾಪರಿ ಆಟೋ ಚಾಲಕ ರಾಜೇಶ್ ಆತನ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ , ಎರಡು ಕರುವನ್ನು ಅಮಾನುಷವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ಮನೆಯ ಪಕ್ಕದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ರಾಜೇಶ್ ಮತ್ತು ಆತನ ಸಹಚರರು ಅವರ ಬೆಂಗಾವಲು ವಾಹನ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾರೆ.


ಈ ವೇಳೆ ಅವರದ್ದೇ ಮತ್ತೊಂದು ತಂಡ ಕಸಾಯಿಖಾನೆಗೆ ದನವನ್ನು ತುರ್ತು ಸೇವೆಗಳ ಪಾಸ್ ಪಡೆದು ಪಿಕಪ್ ವಾಹನ ಮತ್ತು ಬೆಂಗಾವಲು ಕಾರಲ್ಲಿ ಹೋಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಅವರನ್ನು ಹಿಡಿಯಲು ಗುರುವಾಯನಕೆರೆ ಬಳಿ ಹೋದಾಗ ಇಬ್ಬರು ಭಜರಂಗದಳ ಕಾರ್ಯಕರ್ತರಾದ ಗುರು ಮತ್ತು ನಿತೀಶ್ ಮೇಲೆ ಮಾರಣಾಂತಿಕ ದಾಳಿ ಮಾಡಿ, ಎರಡು ಮೊಬೈಲ್ , ನಗ ನಗದು ದರೋಡೆ ಮಾಡಿದ್ದಾರೆ. ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ‌.


ಮಂಗಳೂರಿನ ಕರೀಂ ಎಂವರಿಗೆ ಸೇರಿದ ಪಿಕಪ್ ಇದಾಗಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಸಾಗಾಟಕ್ಕೆ ಪಾಸ್ ಪಡೆದು ಗ್ರಾಮೀಣ ಭಾಗಗಳಿಂದ ಗೋ ಕಳ್ಳತನ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ .
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಟದ ದೊಡ್ಡ ಜಾಲ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ