COVID 19ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿದ ಖದೀಮರು! ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಗೋ ಕಳ್ಳರು!

ಬೆಳ್ತಂಗಡಿ : ಚಿಕನ್ ಸೆಂಟರ್ ಹೆಸರಿನಲ್ಲಿ COVID 19 ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಗೋ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ಭೀಮನ ಅಮವಾಸ್ಯೆ ದಿನ ಮುಂಜಾನೆ ಮೂರು ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಸುರ್ಯ ಪಡ್ಪು ಗೋ ವ್ಯಾಪರಿ ಆಟೋ ಚಾಲಕ ರಾಜೇಶ್ ಆತನ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ , ಎರಡು ಕರುವನ್ನು ಅಮಾನುಷವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ಮನೆಯ ಪಕ್ಕದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ರಾಜೇಶ್ ಮತ್ತು ಆತನ ಸಹಚರರು ಅವರ ಬೆಂಗಾವಲು ವಾಹನ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾರೆ.


ಈ ವೇಳೆ ಅವರದ್ದೇ ಮತ್ತೊಂದು ತಂಡ ಕಸಾಯಿಖಾನೆಗೆ ದನವನ್ನು ತುರ್ತು ಸೇವೆಗಳ ಪಾಸ್ ಪಡೆದು ಪಿಕಪ್ ವಾಹನ ಮತ್ತು ಬೆಂಗಾವಲು ಕಾರಲ್ಲಿ ಹೋಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಅವರನ್ನು ಹಿಡಿಯಲು ಗುರುವಾಯನಕೆರೆ ಬಳಿ ಹೋದಾಗ ಇಬ್ಬರು ಭಜರಂಗದಳ ಕಾರ್ಯಕರ್ತರಾದ ಗುರು ಮತ್ತು ನಿತೀಶ್ ಮೇಲೆ ಮಾರಣಾಂತಿಕ ದಾಳಿ ಮಾಡಿ, ಎರಡು ಮೊಬೈಲ್ , ನಗ ನಗದು ದರೋಡೆ ಮಾಡಿದ್ದಾರೆ. ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ‌.


ಮಂಗಳೂರಿನ ಕರೀಂ ಎಂವರಿಗೆ ಸೇರಿದ ಪಿಕಪ್ ಇದಾಗಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಸಾಗಾಟಕ್ಕೆ ಪಾಸ್ ಪಡೆದು ಗ್ರಾಮೀಣ ಭಾಗಗಳಿಂದ ಗೋ ಕಳ್ಳತನ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ .
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಟದ ದೊಡ್ಡ ಜಾಲ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 34 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ