ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದೆ.

ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಕೋವಿಡ್-19ರ ರೋಗದಿಂದ ಮೃತಪಟ್ಟ ಸರ್ಕಾರಿ ನೌಕರರ ವಿಮಾ ಪರಿಹಾರ ಮೊತ್ತವನ್ನು ಉಲ್ಲೇಖ(1)ರ ಆದೇಶದ ಕಂಡಿಕೆ 03ರಲ್ಲಿ ತಿಳಿಸಿರುವಂತೆ ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಕರ್ತವ್ಯಗಳನ್ನು ಮಾಡುವಾಗ ಸರ್ಕಾರಿ ನೌಕರರು ಕೋವಿಡ್-19 ರೋಗಕ್ಕೆ ತುತ್ತಾಗಿ ಮೃತರಾದರೇ, ಜಿಲ್ಲಾ ಮಟ್ಟದಲ್ಲಿ ಡಿಸಿ ಮತ್ತು ಟಿಹೆಚ್‌ಓ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಕೋವಿಡ್ ನೋಡಲ್ ಅಧಿಕಾರಿಯಿಂದ ಪ್ರಮಾಣ ಪತ್ರವನ್ನು ಪಡೆದು, ನಂತ್ರ ಕಂಡಿಕೆ 02 ರಡಿಯಲ್ಲಿ ಸೂಚಿಸಿರುವಂತೆ ಮೃತಪಟ್ಟ ಸರ್ಕಾರಿ ನೌಕರರ ಸಂಬಳವನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಸೆಳೆಯಲಾಗುತ್ತದೆಯೋ, ಸದರಿ ಲೆಕ್ಕ ಶೀರ್ಷಿಕೆಯ ಕಚೇರಿ ವೆಚ್ಚಗಳಡಿ ಸೆಳೆಯಬೇಕಾಗುತ್ತದೆ ಎಂದು ಆದೇಶಿಸಲಾಗಿದೆ.

ಒಂದು ವೇಳೆ ಆ ಲೆಕ್ಕ ಶೀರ್ಷಿಕೆಯಲ್ಲಿ ಅನುದಾನ ಲಭ್ಯವಿಲ್ಲವೆಂದು ಕಂಡುಬಂದಲ್ಲಿ, ಉಲ್ಲೇಖ (2)ರಲ್ಲಿ ತಿಳಿಸಿರುವಂತೆ ಕೋವಿಡ್-19ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮದಡಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ರೋಗಗ್ರಸ್ತರ ಸಂಪರ್ಕದಿಂದ ಮರಣ ಹೊಂದಿದ್ದಲ್ಲಿ ಅವರ ಕುಟುಂಬಸ್ಥರಿಗೆ ರೂ.30 ಲಕ್ಷಗಳನ್ನು ಪರಿಹಾವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಮೃತರಾದ ನೌಕರರ ಕುಟುಂಬಕ್ಕೆ 30 ಲಕ್ಷ ವಿಮಾ ಮೊತ್ತವನ್ನು ಉಲ್ಲೇಖ(1) ಅಥವಾ ಉಲ್ಲೇಖ(2)ರ ಆದೇಶದಂತೆ ಮೃತರ ಕುಟುಂಬಕ್ಕೆ ಪಾವತಿಸಲು ಸೂಚಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ