ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದೆ.

ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಕೋವಿಡ್-19ರ ರೋಗದಿಂದ ಮೃತಪಟ್ಟ ಸರ್ಕಾರಿ ನೌಕರರ ವಿಮಾ ಪರಿಹಾರ ಮೊತ್ತವನ್ನು ಉಲ್ಲೇಖ(1)ರ ಆದೇಶದ ಕಂಡಿಕೆ 03ರಲ್ಲಿ ತಿಳಿಸಿರುವಂತೆ ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಕರ್ತವ್ಯಗಳನ್ನು ಮಾಡುವಾಗ ಸರ್ಕಾರಿ ನೌಕರರು ಕೋವಿಡ್-19 ರೋಗಕ್ಕೆ ತುತ್ತಾಗಿ ಮೃತರಾದರೇ, ಜಿಲ್ಲಾ ಮಟ್ಟದಲ್ಲಿ ಡಿಸಿ ಮತ್ತು ಟಿಹೆಚ್‌ಓ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಕೋವಿಡ್ ನೋಡಲ್ ಅಧಿಕಾರಿಯಿಂದ ಪ್ರಮಾಣ ಪತ್ರವನ್ನು ಪಡೆದು, ನಂತ್ರ ಕಂಡಿಕೆ 02 ರಡಿಯಲ್ಲಿ ಸೂಚಿಸಿರುವಂತೆ ಮೃತಪಟ್ಟ ಸರ್ಕಾರಿ ನೌಕರರ ಸಂಬಳವನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಸೆಳೆಯಲಾಗುತ್ತದೆಯೋ, ಸದರಿ ಲೆಕ್ಕ ಶೀರ್ಷಿಕೆಯ ಕಚೇರಿ ವೆಚ್ಚಗಳಡಿ ಸೆಳೆಯಬೇಕಾಗುತ್ತದೆ ಎಂದು ಆದೇಶಿಸಲಾಗಿದೆ.

ಒಂದು ವೇಳೆ ಆ ಲೆಕ್ಕ ಶೀರ್ಷಿಕೆಯಲ್ಲಿ ಅನುದಾನ ಲಭ್ಯವಿಲ್ಲವೆಂದು ಕಂಡುಬಂದಲ್ಲಿ, ಉಲ್ಲೇಖ (2)ರಲ್ಲಿ ತಿಳಿಸಿರುವಂತೆ ಕೋವಿಡ್-19ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮದಡಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ರೋಗಗ್ರಸ್ತರ ಸಂಪರ್ಕದಿಂದ ಮರಣ ಹೊಂದಿದ್ದಲ್ಲಿ ಅವರ ಕುಟುಂಬಸ್ಥರಿಗೆ ರೂ.30 ಲಕ್ಷಗಳನ್ನು ಪರಿಹಾವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಮೃತರಾದ ನೌಕರರ ಕುಟುಂಬಕ್ಕೆ 30 ಲಕ್ಷ ವಿಮಾ ಮೊತ್ತವನ್ನು ಉಲ್ಲೇಖ(1) ಅಥವಾ ಉಲ್ಲೇಖ(2)ರ ಆದೇಶದಂತೆ ಮೃತರ ಕುಟುಂಬಕ್ಕೆ ಪಾವತಿಸಲು ಸೂಚಿಸಿದ್ದಾರೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ