ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಗೌಡ ಸಂಘದ ವತಿಯಿಂದ 2026ನೇ ಸಾಲಿನ “ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ”ವನ್ನು ಫೆಬ್ರವರಿ 22ರಂದು ಭಾನುವಾರ ಬೆಳಿಗ್ಗೆ 8.30 ಗಂಟೆಯಿಂದ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಕಾಲಭೈರವ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ಸಮುದಾಯದ…

    Spread the love

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಕನ್ಯಾಡಿ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ ನೀಡಿದ್ದರು ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಶ್ರೀ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಶ್ರೀ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಶ್ರೀ ಗಣೇಶ್ ಶೆಟ್ಟಿ,…

    Spread the love

    You Missed

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 106 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 50 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    • By admin
    • February 20, 2026
    • 39 views
    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

    • By admin
    • February 18, 2026
    • 498 views
    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್  ಪೋಲೀಸ್ ವಶಕ್ಕೆ

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 163 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ