ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    You Missed

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 26 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 120 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 140 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 40 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 46 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ