ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.  ಈ ವೇಳೆ ಅವರ ಮೊಬೈಲ್ ನ್ನು ಪಾಪಿಗಳು ಯಾರೋ ಕದ್ದಿದ್ದಾರೆ. ಇದೀಗ ಅವರ ಪುಟ್ಟ ಮಗಳು ಅಮ್ಮನ ಮೊಬೈಲ್ ದಯವಿಟ್ಟು ಹುಡುಕಿ ಕೊಡಿ, ತೆಗೆದುಕೊಂಡವರು ದಯವಿಟ್ಟು ವಾಪಾಸ್ ಕೊಡಿ ಎಂದು ಅಂಗಲಾಚುತ್ತಿದ್ದಾಳೆ.

ಅಲ್ಲದೇ ಅದರಲ್ಲಿ ನನ್ನ ಅಮ್ಮನ ಸವಿ ನೆನಪುಗಳಿವೆ. ಅದರಲ್ಲಿ ಆಕೆಯ ಫೋಟೋಗಳಿವೆ ಎಂದು  ಬೇಡಿಕೊಂಡಿದ್ದಾಳೆ. ಅಲ್ಲದೇ ಪತ್ರ ಕೂಡ ಬರೆದಿದ್ದಾಳೆ.

ಪತ್ರದಲ್ಲಿ ಏನಿದೆ?

ಕೊಡಗು ಜಿಲ್ಲಾಧಿಕಾರಿಗಳು ಮತ್ತು ಶಾಸಕರುಗಳು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆ ಸಿಬ್ಬಂದಿಗಳಲ್ಲಿ ಮನವಿ..

ಸುಮಾರು 15 ದಿನಗಳ ಹಿಂದೆ ನಾನು ಮತ್ತು ಅಪ್ಪ, ಅಮ್ಮ ಅವರು ಕೋವಿಡ್ ಗೆ ತುತ್ತಾಗಿದ್ದು, ತಾಯಿಯವರು 15 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆ, ಮಡಿಕೇರಿ ಇಲ್ಲಿಗೆ ಕಾಯಿಲೆ ಉಲ್ಬಣಗೊಂಡು, ಸೇರಿರುತ್ತಾರೆ.

ನಾನು ಮತ್ತು ಅಪ್ಪ, ಹೋಂ ಕ್ವಾರೆಂಟ್ ಆಗಿದ್ದು, ಹೊರಗೆ ಬರಲಾರದ ಸ್ಥಿತಿಯಲ್ಲಿದ್ದು, ತಂದೆಯವರು ದಿನಗೂಲಿ ನೌಕರರಾಗಿದ್ದು, ಅಕ್ಕ-ಪಕ್ಕದವರ ಸಹಾಯದಿಂದ ಈ ದಿನಗಳನ್ನು ಕಳೆದೆವು.

ದಿನಾಂಕ 16-05-2021ರಂದು ನಮ್ಮ ತಾಯಿಯವರು ಮೃತರಾದರು. ಅವರ ಜೊತೆಯಲ್ಲಿ ಇದ್ದಂತಹ ಮೊಬೈಲ್ ಅನ್ನು ಯಾರೋ ತೆಗೆದುಕೊಂಡಿರುತ್ತಾರೆ. ನಾನು ತಬ್ಬಲಿಯಾಗಿದ್ದು, ನನ್ನ ತಾಯಿಯ ನೆನಪುಗಳು ಆ ಮೊಬೈಲ್ ನಲ್ಲಿ ಇರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದಾರೆ ಅಥವಾ ಸಿಕ್ಕಿದ್ದರೆ, ದಯವಿಟ್ಟು ಈ ತಬ್ಬಲಿಯ ವಿಳಾಸ ಹಾರಂಗಿ ರಸ್ತೆ, ಗುಮ್ಮನಕೊಲ್ಲಿ ಗ್ರಾಮ, ಬಸಪ್ಪ ಬಡಾವಣೆ, ಕುಶಾಲನಗರ-571234, ಕೊಡಗು ಜಿಲ್ಲೆ ಇಲ್ಲಿಗೆ ತಲುಪಿಸಿ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ.

ಇಂತಿ……… ತಾಯಿಯನ್ನು ಕಳೆದುಕೊಂಡ ನತದೃಷ್ಟೆ, ಹೃತಿಕ್ಷ

ಹೀಗೆಂದು ಬರೆದುಕೊಂಡಿದ್ದು ಬಾಲಕಿಯ ಮನವಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಮೊಬೈಲ್ ಕದ್ದವರು ದಯವಿಟ್ಟು ವಾಪಾಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 7 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 5 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ